


ಬೆಂಗಳೂರು: ತುಳು ಸಿನಿಮಾ ‘ಜೀಟಿಗೆ’ ಹೆಸರಿನ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ಮಾಣ ಮಾಡಿದ್ದ ಅರುಣ್ ರೈ ವಿರುದ್ಧ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಮೂಲದ ಉದ್ಯಮಿಯೊಬ್ಬರನ್ನು ಬೆಂಗಳೂರಿನ ತಾಜ್ ಹೋಟೆಲ್ನಲ್ಲಿ ಪರಿಚಯ ಮಾಡಿಕೊಂಡಿದ್ದ ನಿರ್ಮಾಪಕ ಅರುಣ್ ರೈ, ತಾನು ‘ವೀರಕಂಬಳ’ ಸಿನಿಮಾ ನಿರ್ಮಾಣ ಮಾಡುತ್ತಿದ್ದು ಅದರ ಲಾಭಾಂಶದಲ್ಲಿ 60 ಲಕ್ಷ ರೂಪಾಯಿ ಕೊಡುವುದಾಗಿ ಹೇಳಿ ಹಣ ಪಡೆದುಕೊಂಡಿದ್ದಾನೆ ಎನ್ನಲಾಗಿದೆ.
ಬೆಂಗಳೂರಿನ ಯಶವಂತಪುರ ತಾಜ್ ಹೋಟೆಲ್ನಲ್ಲಿ ಬಂಟ್ವಾಳ ಮೂಲದ ಉದ್ಯಮಿಯನ್ನು ನಿರ್ಮಾಪಕ ಅರುಣ್ ರೈ ಪರಿಚಯಿಸಿಕೊಂಡಿದ್ದರು. ‘ವೀರ ಕಂಬಳ’ ಸಿನಿಮಾ ನಿರ್ಮಾಣ ಮಾಡುತ್ತಿದ್ದೇನೆ. ಅದರ ಲಾಭಾಂಶದಲ್ಲಿ 60 ಲಕ್ಷ ರೂ. ಕೊಡೋದಾಗಿ ಮೊದಲು ಉದ್ಯಮಿಗೆ ನಂಬಿಸಿ ಹಣ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅರುಣ್ ರೈ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಕುರಿತು ಆರ್.ಎಂ.ಸಿ ಯಾರ್ಡ್ ಪೊಲೀಸರು ತನಿಖೆಗೊಂಡಿದ್ದಾರೆ. ಅಂದಹಾಗೆ, ತುಳುವಿನ ಜೀಟಿಗೆ, ವೀರ ಕಂಬಳ ಸಿನಿಮಾವನ್ನು ಅರುಣ್ ರೈ ನಿರ್ಮಾಣ ಮಾಡಿದ್ದಾರೆ.
ಮಾಹಿತಿ ಪ್ರಕಾರ, ಬಂಟ್ವಾಳ ಮೂಲದ ಉದ್ಯಮಿಗೆ ಗೇರು ಬೀಜಾ ಸಂಸ್ಕರಣಾ ಘಟಕದಲ್ಲಿ 25 ಕೋಟಿ ನಷ್ಟವಾಗಿತ್ತು. ಉದ್ಯಮಿಯ ನಷ್ಟದ ಕಥೆಯನ್ನೆ ಪ್ಲಸ್ ಪಾಯಿಂಟ್ ಮಾಡಿಕೊಂಡಿರೋ ನಿರ್ಮಾಪಕ ನನ್ನ ಕಂಪನಿಗಳಲ್ಲಿ ಹೂಡಿಕೆ ಮಾಡಿ ಕೋವಿಡ್ ವೇಳೆ ಆದ ನಷ್ಟ ಸರಿದೂಗಿಸ್ತೇನೆ ಎಂದು ಉದ್ಯಮಿಯನ್ನು ನಂಬಿಸಲಾಗಿದೆ ಎನ್ನಲಾಗಿದೆ.