Thursday, March 28, 2024
spot_imgspot_img
spot_imgspot_img

ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಆರೋಪ – ಕಾಂಗ್ರೆಸ್ ಎಂಎಲ್ ಸಿ ಪುತ್ರ ವಶಕ್ಕೆ

- Advertisement -G L Acharya panikkar
- Advertisement -

ಬೆಂಗಳೂರು: ಕರ್ತವ್ಯ ನಿರತ ಮೂವರು ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ವಿಧಾನಪರಿಷತ್ ಸದಸ್ಯರೊಬ್ಬರ ಪುತ್ರನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ನಾಸಿರ್ ಅಹಮ್ಮದ್ ಪುತ್ರ ಫಯಾಜ್ ಮತ್ತು ಗೆಳೆಯರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹೆಬ್ಬಾಳ ಬಿಎಂಟಿಸಿ ಡಿಪೋ ಬಳಿ ಈ ಘಟನೆ ಸಂಭವಿಸಿದೆ.

ಅತೀ ವೇಗವಾಗಿ ಚಲಿಸುತ್ತಿದ್ದ ಕಾರನ್ನು ಪೊಲೀಸರು ತಡೆದಾಗ ಮದ್ಯ ಸೇವಿಸಿದ್ದ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!