- Advertisement -
- Advertisement -



ಮಂಗಳೂರು: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೊಬ್ಬನು ಕ್ಯಾಬಿನ್ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ ಇತರ ಪ್ರಯಾಣಿಕರಿಗೆ ತೊಂದರೆಯುಂಟು ಮಾಡಿದ ಆರೋಪದಲ್ಲಿ ಮಂಗಳೂರಿನ ಬಜ್ಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕೇರಳದ ಕಣ್ಣೂರು ನಿವಾಸಿ ಮುಹಮ್ಮದ್ ಬಿ.ಸಿ. ಬಂಧಿತ ಪ್ರಯಾಣಿಕ.
ಮೇ 8ರಂದು ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದಲ್ಲಿ ಮುಹಮ್ಮದ್ ಬಿ.ಸಿ. ಪ್ರಯಾಣಿಸುತ್ತಿದ್ದರು. ಈ ವೇಳೆ ವಿಮಾನದ ಸಿಬ್ಬಂದಿಯೊಂದಿಗೆ ಅಶಿಸ್ತಿನಿಂದ ವರ್ತಿಸಿ ಇತರ ಪ್ರಯಾಣಿಕರಿಗೆ ತೊಂದರೆ ನೀಡಿದ್ದ ಎನ್ನಲಾಗಿದೆ. ಅದರಂತೆ ವಿಮಾನ ಮಂಗಳೂರು ವಿಮಾನನಿಲ್ದಾಣವನ್ನು ತಲುಪುತ್ತಿದ್ದಂತೆ ಆತನನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನೊಂದಿಗೆ ಬಜ್ಪೆ ಠಾಣೆಗೆ ಹಸ್ತಾಂತರಿಸಿದ್ದಾರೆ.
ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
- Advertisement -