Sunday, April 28, 2024
spot_imgspot_img
spot_imgspot_img

ಕ್ಷುಲ್ಲಕ ವಿಚಾರಕ್ಕಾಗಿ ಬಾರ್‌ ಕ್ಯಾಶಿಯರ್‌ನನ್ನು ಡ್ರ್ಯಾಗರ್‌ನಿಂದ ಚುಚ್ಚಿ ಕೊಲೆಗೈದ ದುಷ್ಕರ್ಮಿಗಳು

- Advertisement -G L Acharya panikkar
- Advertisement -

ಕ್ಷುಲ್ಲಕ ವಿಚಾರಕ್ಕಾಗಿ ಬಾರ್‌ ಕ್ಯಾಶಿಯರ್‌ಗೆ ಡ್ರ್ಯಾಗರ್‌ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಬಾರ್‌ವೊಂದರಲ್ಲಿ ನಡೆದಿದೆ.

ಬಾರ್‌ ಕ್ಯಾಶಿಯರ್‌ ಸಚಿನ್‌ (27) ಕೊಲೆಯಾದ ವ್ಯಕ್ತಿ. ಬಾರ್‌ ಬಂದ್‌ ಮಾಡುವ ಸಮಯವಾದರು ಬಾರ್‌ಗೆ ಗಾಂಜಾ ಅಮಲಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಬಾರ್‌ನ ಕ್ಯಾಶಿಯರ್‌ನಲ್ಲಿ ಮದ್ಯ ಕೇಳಿದ್ದಾರೆ. ಬಾರ್‌ ಸಿಬ್ಬಂದಿ ಸಮಯವಾಗಿದೆ ಎಂದು ತಿಳಿಸಿದ್ದು, ಆದರೆ ತಾವು ಇನ್ನೂ ಮದ್ಯ ಸೇವಿಸಬೇಕಿದೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.

ಆಗ ಬಾರ್‌ನ ಅಸಿಸ್ಟೆಂಟ್‌ ಕ್ಯಾಶಿಯರ್‌ ಪೊಲೀಸರಿಗೆ ಕರೆ ಮಾಡಿದ್ದು, ಪೊಲೀಸರು ಬರುತ್ತಿದ್ದಂತೆ ಕ್ಯಾಶಿಯರ್‌ ಸಚಿನ್‌ ವಿರುದ್ಧ ಮೂವರು ಯುವಕರು ಆಕ್ರೋಶಗೊಂಡು ಹಲ್ಲೆ ನಡೆಸಿದ್ದಾರೆ.

ಈ ಪೈಕಿ ಓರ್ವ ಯುವಕ ಬಿಯರ್‌ ಬಾಟಲಿಯನ್ನು ತಲೆಗೆ ಹೊಡದುಕೊಂಡು ಬಾರ್‌ ಸಿಬ್ಬಂದಿಗೆ ಚುಚ್ಚಲು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ಅಸಿಸ್ಟೆಂಟ್‌ ಕ್ಯಾಶಿಯರ್‌ ಅರುಣ್‌ ಕುಮಾರ್‌ ಕೈಗೆ ಸಣ್ಣ ಗಾಯವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಓರ್ವ ಯುವಕ ತನ್ನ ಬಳಿ ಇದ್ದ ಡ್ರ್ಯಾಗರ್‌ ತೆಗೆದು ಕ್ಯಾಶಿಯರ್‌ ಸಚಿನ್‌ ಎದೆಯ ಬಲಭಾಗಕ್ಕೆ ಚುಚ್ಚಿದ್ದು, ಗಂಭೀರ ಗಾಯಗೊಂಡಿದ್ದ ಸಚಿನ್‌ನನ್ನು ಬಾರ್‌ ಸಿಬ್ಬಂದಿ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಪರೀಕ್ಷೆ ನಡೆಸಿದ ವೈದ್ಯರು ಸಚಿನ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

- Advertisement -

Related news

error: Content is protected !!