Saturday, June 28, 2025
spot_imgspot_img
spot_imgspot_img

ಠಾಣೆಯಲ್ಲಿ ಪಿಸ್ತೂಲ್ ಪರಿಶೀಲನೆ ವೇಳೆ ಮಿಸ್ ಫೈರಿಂಗ್: ಪೊಲೀಸ್ ಕಾನ್ ಸ್ಟೇಬಲ್‌ ಕಾಲಿಗೆ ಗುಂಡೇಟು

- Advertisement -
- Advertisement -

ಪಿಸ್ತೂಲ್ ಪರಿಶೀಲನೆ ವೇಳೆ ಮಿಸ್ ಫೈರಿಂಗ್ ಆಗಿ ಪೊಲೀಸ್ ಕಾನ್ ಸ್ಟೇಬಲ್‌ ಕಾಲಿಗೆ ಗುಂಡೇಟು ತಗಲಿರುವ ಘಟನೆ ಬೊಮ್ಮನಹಳ್ಳಿ ವ್ಯಾಪ್ತಿಯ ಬೇಗೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಅಂಬುದಾಸ್ ಎಂಬವರು ಗುಂಡೇಟು ತಗಲಿ ಗಾಯಗೊಂಡಿರುವ ಪೊಲೀಸ್ ಕಾನ್ ಸ್ಟೇಬಲ್‌.

ಮುಕುಂದ ರೆಡ್ಡಿ ಎಂಬವರು ಬೇಗೂರು ಪೊಲೀಸ್ ಠಾಣೆಗೆ ಪಿಸ್ತೂಲ್ ತಂದು ಜಮಾ ಮಾಡಿದ್ದರು. ಪೊಲೀಸ್ ಕಾನ್ಸ್ ಟೇಬಲ್ ಪಿಸ್ತೂಲು ಪರಿಶೀಲನೆ ವೇಳೆ ಟ್ರಿಗರ್ ಒತ್ತಿದ್ದಾರೆ. ಈ ವೇಳೆ ಏಕಾಏಕಿ ಮಿಸ್ ಫೈರ್ ಆಗಿ, ಮತ್ತೊಬ್ಬ ಪೊಲೀಸ್ ಪೇದೆ ಅಂಬುದಾಸ್ ಕಾಲಿಗೆ ಗುಂಡೇಟು ತಗುಲಿದೆ. ಗಾಯಾಳುವನ್ನು ಅಪೊಲೋ ಆಸ್ಪತ್ರೆಗೆ ದಾಖಸಲಾಗಿದೆ.

ಈ ಘಟನೆಯಿಂದ ಪೊಲೀಸ್ ಠಾಣೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಸ್ಥಳಕ್ಕೆ ಬಂದ ಎಫ್‍ಎಸ್‍ಎಲ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!