Saturday, June 28, 2025
spot_imgspot_img
spot_imgspot_img

ಉಡುಪಿ: ಯುವಕ ನಾಪತ್ತೆ : 8 ದಿನಗಳ ಬಳಿಕ ಕಾಡಿನ ಸಮೀಪ ಪತ್ತೆ

- Advertisement -
- Advertisement -

ಉಡುಪಿ: ನಾಪತ್ತೆಯಾಗಿದ್ದ ಯುವಕ 8 ದಿನಗಳ ಬಳಿಕ ಕಾಡಿನ ಸಮೀಪ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿ ನಡೆದಿದೆ.

ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ಶೀನ ನಾಯ್ಕ ಎಂಬವರ ಪುತ್ರ ವಿವೇಕಾನಂದ ಎಂಬವರು ಎಂಟು ದಿನಗಳ ಬಳಿಕ ಪತ್ತೆಯಾಗಿದ್ದಾರೆ. ಸೆ.16ರಂದು ಮನೆಯಿಂದ ಹೊರಗೆ ಹೋದ ಇವರು ಬಳಿಕ ನಾಪತ್ತೆಯಾಗಿದ್ದರು.

ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ತೊಂಬಟ್ಟು ಸಮೀಪದ ಕಬ್ಬಿನಾಲೆ ಎಂಬಲ್ಲಿ ವಿವೇಕಾನಂದ ಪತ್ತೆಯಾಗಿದ್ದು, ಕಳೆದ ಎಂಟು ದಿನಗಳಿಂದ ಕಾಡಿನೊಳಗೆಯೇ ಯಾವುದೇ ಆಹಾರ ಇಲ್ಲದೆ ಅಲೆದಾಡಿದ್ದ ವಿವೇಕಾನಂದ ಕಬ್ಬಿನಾಲೆಯ ಮನೆಯೊಂದರ ಸಮೀಪ ಪತ್ತೆಯಾಗಿದ್ದು, ಅವರು ಎಂಟು ದಿನಗಳಿಂದ ಅನ್ನ ಆಹಾರ ಇಲ್ಲದೆ ಅವರು ತೀವ್ರ ನಿತ್ರಾಣಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ

- Advertisement -

Related news

error: Content is protected !!