Saturday, June 28, 2025
spot_imgspot_img
spot_imgspot_img

ನಾಪತ್ತೆಯಾಗಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!!

- Advertisement -
- Advertisement -

ಮಡಿಕೇರಿ: ನಾಪತ್ತೆಯಾಗಿದ್ದ ಯುವಕನೋರ್ವ ಮೃತದೇಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಡಗು ಜಿಲ್ಲೆ ಸುಂಟಿಕೊಪ್ಪದಲ್ಲಿ ನಡೆದಿದೆ.

ಬಾಳೆಕಾಡು ತೋಟದ ನಿವಾಸಿ ಕಪಾಲಿ ಮುರುಗೇಶ್ ಅವರ ಪುತ್ರ ವಿಜಯ (23) ಮೃತ ದುರ್ದೈವಿ.

ಈತ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ. ಸೋಮವಾರ ಸಂಜೆ ತೋಟದ ಮರ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕಾರ್ಮಿಕರು ಕೆಲಸ ಮಾಡಿ ತೆರಳುವ ವೇಳೆ ಯುವಕ ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಕಂಡುಬಂದಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Related news

error: Content is protected !!