Thursday, April 25, 2024
spot_imgspot_img
spot_imgspot_img

ಮಿಥುನ್ ರೈ ಮತ್ತು ಅವರ ತಂದೆ- ತಾಯಿಗೆ ಅವಾಚ್ಯವಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್

- Advertisement -G L Acharya panikkar
- Advertisement -

ಪುತ್ತೂರು: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮತ್ತು ಅವರ ತಂದೆ- ತಾಯಿಗೆ ಅವಾಚ್ಯವಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಚಿತ್ರದುರ್ಗಾದ ಗರುಡ ಕೇಸರಿಯ ಕುಮಾರ ಸ್ವಾಮಿ ಎಂಬಾತನ ವಿರುದ್ಧ ಪುತ್ತೂರು ನಗರ ಠಾಣೆಗೆ ಕಾಂಗ್ರೆಸ್ ಎಸ್. ಸಿ ಘಟಕದ ವತಿಯಿಂದ ದೂರು ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ಉತ್ತರ ಪ್ರದೇಶದ ಹಥಾರಸ್‌ನಲ್ಲಿ ದಲಿತ ಯುವತಿಯ ಅತ್ಯಾಚಾರ ಕೊಲೆ ಪ್ರಕರಣದ ವಿರುದ್ಧ ಮಾತನಾಡಿದ ವಿಷಯದ ಕುರಿತು ಕುಮಾರಸ್ವಾಮಿ ಚಿತ್ರದುರ್ಗ ಎಂಬಾತ ಅವಾಚ್ಯವಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು ಆತನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮಗೈಗೊಳ್ಳುವಂತೆ ಯುವ ದಲಿತ ಮುಖಂಡ ಕೇಶವ ಪಡೀಲ್, ಜಿಲ್ಲಾ ಕಾರ್ಯದರ್ಶಿ ಎಸ್. ಸಿ ಘಟಕದ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ, ಜಯಂತ ನಗರ, ಗಣೇಶ್ ಪಡೀಲ್, ಸತೀಶ್ ಪಡೀಲ್ ರವರು ಪುತ್ತೂರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

- Advertisement -

Related news

error: Content is protected !!