Sunday, June 29, 2025
spot_imgspot_img
spot_imgspot_img

ಕೋಲಾರದಲ್ಲಿ ಶಾಸಕ ಮುನಿರತ್ನ ಪೊಲೀಸ್‌ ವಶಕ್ಕೆ

- Advertisement -
- Advertisement -

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಕೋಲಾರದಲ್ಲಿ ವಶಕ್ಕೆ ಪಡೆದಿದ್ದಾರೆ.

ಕೋಲಾರದ ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ ಸಂಜೆ ಶಾಸಕರನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರ ಮಾರ್ಗವಾಗಿ ಆಂಧ್ರಪ್ರದೇಶಕ್ಕೆ ಮುನಿರತ್ನ ಅವರು ತೆರಳುತ್ತಿದ್ದಾಗ ಬೆಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಹಣಕಾಸಿನ ವಿಚಾರವಾಗಿ ಚಲುವರಾಜು ಅವರನ್ನ ಮುನಿರತ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಎರಡು ಎಫ್​ಐಆರ್​​​ ದಾಖಲಾಗಿದ್ದು, ಮುನಿರತ್ನರನ್ನ ಬಂಧಿಸಲಾಗಿದೆ.

ಶಾಸಕರನ್ನು ವಶಕ್ಕೆ ಪಡೆದು ಪೊಲೀಸರು ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!