Sunday, June 29, 2025
spot_imgspot_img
spot_imgspot_img

ಶಾಸಕ ಪ್ರದೀಪ್ ಈಶ್ವರ್‌ ಮನೆ ಮೇಲೆ ಕಲ್ಲು ತೂರಾಟ

- Advertisement -
- Advertisement -

ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ನಾಯಕ ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದು, ಕಲ್ಲುತೂರಾಟದಲ್ಲಿ ಕಿಟಕಿ ಗಾಜುಗಳು ಪುಡಿಯಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಎಸ್. ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಎಂ.ಮಂಜುನಾಥ ಹಾಗೂ ಸಿಬ್ಬಂದಿ ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಅವರ ತಮ್ಮ ಚೇತನ್, ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆದ್ದ ಕಾರಣ ಅವರ ಬೆಂಬಲಿಗರೆ ಕೃತ್ಯ ಎಸಗಿದ್ದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ.

ರಾತ್ರಿ 10.15 ಸಮಯದಲ್ಲಿ ನಾಲ್ಕು ಜನ ಹುಡುಗರು ಕಲ್ಲು ತೂರಾಟ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ಸೆನ್ಸರ್ ಆನ್ ಆಗ್ತಿದ್ದಂತೆ ಹುಡುಗರು ಓಡಿ ಹೋದರು. ನಾಲ್ಕೈದು ಕಲ್ಲುಗಳನ್ನು ಎಸೆದಿದ್ದಾರೆ. ಮನೆಯ ಕಿಟಕಿ ಪುಡಿ ಪುಡಿ ಆಗಿದೆ.ಇದೇ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆದಿದೆ ಎಂದು ಮನೆಯ ಸಿಬ್ಬಂದಿ ಮುನಿಕೃಷ್ಣ ತಿಳಿಸಿದ್ದಾರೆ.

- Advertisement -

Related news

error: Content is protected !!