- Advertisement -
- Advertisement -
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಜಯರಾಜ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜಯರಾಜ್ ಕಳೆದ ಆರು ವರ್ಷಗಳಿಂದ ಮಹಾನಗರ ಪಾಲಿಕೆಯಲ್ಲಿ ಕರ್ತವ್ಯದಲ್ಲಿದ್ದಾರೆ. ಜಯರಾಜ್ ಬಿಜೈ ಕಾಪಿಕಾಡಿನಲ್ಲಿ ಮನೆ ಹೊಂದಿದ್ದು ಅಲ್ಲಿ ಮತ್ತು ಕಚೇರಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಜಯರಾಜ್ ಪತ್ನಿ ಕೇರಳದ ಕೊಚ್ಚಿ ಬಳಿಯ ಕೇಂದ್ರಾಡಳಿತ ಪ್ರದೇಶ ಮಾಹೆಯಲ್ಲಿ ಕೇಂದ್ರ ಸರಕಾರಿ ಇಲಾಖೆಯ ವೈದ್ಯೆ ಆಗಿದ್ದಾರೆ. ಮಂಗಳೂರು ಮತ್ತು ಕೇರಳದಲ್ಲಿ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ. ಕೇರಳದಲ್ಲಿರುವ ಪತ್ನಿಯ ಕ್ವಾಟ್ರಸ್ ಮೇಲೂ ದಾಳಿ ನಡೆಸಲಾಗಿದೆ. ಎಸಿಬಿ ಎಸ್ಪಿ ಬೋಪಯ್ಯ, ಡಿವೈಎಸ್ಪಿ ಕೆ.ಸಿ ಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆದಿದೆ.


- Advertisement -