- Advertisement -
- Advertisement -
ಮಂಗಳೂರು: ಕಂಕನಾಡಿ ಜಂಕ್ಷನ್ನಲ್ಲಿ ಬಸ್ ಮತ್ತು ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಇಂದು ಮುಂಜಾನೆ ನಡೆದಿದೆ.
ಬಸ್ ಮತ್ತು ಲಾರಿ ಎರಡೂ ಮಂಗಳಾದೇವಿಗೆ ಹೋಗುತ್ತಿದ್ದವು. ಎಡಕ್ಕೆ ತಿರುಗುವ ಸಂದರ್ಭ ಪಂಪ್ವೆಲ್ ಕಡೆಗೆ ಚಲಿಸುತ್ತಿದ್ದ ಲಾರಿ ಬಸ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಸ್ವಲ್ಪ ಸಮಯದವರೆಗೆ ಸಂಚಾರ ಅಡಚಣೆ ಉಂಟಾಯಿತು. ಕದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿದ್ದಾರೆ.
- Advertisement -