Sunday, June 29, 2025
spot_imgspot_img
spot_imgspot_img

ಬಂಟ್ವಾಳ: ಗಾಳಿ ಮಳೆಗೆ ಹಲವು ವಿದ್ಯುತ್ ಕಂಬಗಳು, ಮೊಬೈಲ್ ಟವರ್, ಧರಾಶಾಹಿ!

- Advertisement -
- Advertisement -

ಬಂಟ್ವಾಳ : ಗಾಳಿ ಮಳೆಗೆ ಹಲವು ವಿದ್ಯುತ್ ಕಂಬಗಳು, ಮೊಬೈಲ್ ಟವರ್, ಅಂಗಡಿ ಹೋಟೆಲ್ ಗಳ ನಾಮಫಲಕಗಳು ಧರಾಶಾಹಿಯಾದ ಘಟನೆ ಬಿ.ಸಿ.ರೋಡ್ ಮುಖ್ಯರಸ್ತೆಯಲ್ಲಿ ಮಂಗಳವಾರ ರಾತ್ರಿ 10 ರ ವೇಳೆಗೆ ನಡೆದಿದೆ.

ಘಟನೆಯಿಂದಾಗಿ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದಿಂದ ಕೈಕಂಬದ ತನಕ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವೃತ್ತದ ಬಳಿ ವಿದ್ಯುತ್ ಕಂಬಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದಿದ್ದು ರಸ್ತೆ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್ ಉಂಟಾಗಿದೆ .

ಸ್ಥಳಕ್ಕೆ ಕಂದಾಯ ಅಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಗಳು, ಬಂಟ್ವಾಳ ನಗರ ಹಾಗೂ ಸಂಚಾರಿ ಪೊಲೀಸರು ದೌಡಾಯಿಸಿದ್ದು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ
ಘಟನೆಯಿಂದ ಯಾವುದೇ ಜೀವ ಹಾನಿಯಾದ ಬಗ್ಗೆ ವರದಿಯಾಗಿಲ್ಲ.ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

- Advertisement -

Related news

error: Content is protected !!