- Advertisement -
- Advertisement -
: ಭಾರೀ ಮಳೆ , ಪ್ರವಾಹಕ್ಕೆ ತತ್ತಾರಿಸುವ ಕಲ್ಯಾಣ ಕರ್ನಾಟಕದ ನೆರೆ ಹಾವಳಿ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿವರ ಪಡೆದಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕರೆ ಮಾಡಿ ಚರ್ಚೆ ಮಾಡಿರುವ ಅವರು, ರಾಜ್ಯದಲ್ಲಿ ಸುರಿದ ಭೀಕರ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಸಂತ್ರಸ್ತರ ನೆರವಿಗೆ ಸೂಕ್ತ ರಕ್ಷಣಾ ಹಾಗೂ ಅಗತ್ಯ ಪರಿಹಾರಕೊಳ್ಳಲು ಕೇಂದ್ರದಿಂದ ಎಲ್ಲಾ ರೀತಿಯ ಸಹಾಯ ಮಾಡುವ ಭರವಸೆ ನೀಡಿದ್ದಾರೆ. ಯಡಿಯೂರಪ್ಪ ಅವರೊಂದಿಗೆ ಮಾತನಾಡಿರುವ ಕುರಿತು ಟ್ವೀಟ್ ಮಾಡಿರುವ ಅವರು, ಸಂತ್ರಸ್ತ ಅಣ್ಣ-ಅಕ್ಕಂದಿರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವುದಾಗಿ ತಿಳಿಸಿದ್ದಾರೆ.
- Advertisement -