- Advertisement -
- Advertisement -
ರಾಮನಗರ: ವಿದ್ಯುತ್ ಶಾರ್ಟ್ ಸರ್ಕೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು.ಅಗರಬತ್ತಿ ಕಾರ್ಖಾನೆಯಲ್ಲಿ ಹೊತ್ತಿ ಉರಿದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತರಳು ಗ್ರಾಮದಲ್ಲಿ ನಡೆದಿದೆ.
ಶಾರ್ಟ್ ಸರ್ಕೂಟ್ ನಿಂದ ಇಂತಹದೊಂದು ಅವಘಡ ಸಂಭವಿಸಿದ್ದು ಮೋಕ್ಷ ಅಗರಬತ್ತಿ ಕಾರ್ಖಾನೆಗೆ ಬೆಂಕಿಗೆ ಅಹುತಿಯಾಗಿದೆ.ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುವುದಕ್ಕೆ ಹರ ಸಾಹಸ ಪಡುವಂತಹ ಪರಿಸ್ಥಿತಿ ಉಂಟಾಗಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಕಾರ್ಖಾನೆಯಿಂದ ಹೊರ ಓಡಿದ್ದಾರೆ.ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಕಾರ್ಮಿಕರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.
- Advertisement -