Thursday, April 25, 2024
spot_imgspot_img
spot_imgspot_img

ಮೂಡುಬಿದಿರೆ: ಹಾಡ-ಹಗಲೇ ಎರಡು ಮನೆಗಳಿಗೆ ಕನ್ನ ಹಾಕಿದ ಖದೀಮರು..!!

- Advertisement -G L Acharya panikkar
- Advertisement -
vtv vitla

 ಮೂಡುಬಿದಿರೆ: ಬೆಳಗಿನ ಜಾವ  ಎರಡು ಮನೆಗಳಿಗೆ ಕಳ್ಳರು ನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ದೋಚಿದ ಘಟನೆ ಮೂಡಬಿದ್ರೆಯ ಆಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಬ್ಯಾಂಕ್‌ ಉದ್ಯೋಗಿಗಳಾಗಿರುವ “ಕ್ಷೇಮ”ದ ರತ್ನಾಕರ ಜೈನ್ ಮತ್ತು ನೆರೆ ಮನೆಯಲ್ಲಿರುವ ಧೀರೇಂದ್ರ ಹೆಗ್ಡೆ ಅವರು ಕುಟುಂಬ ಸಮೇತ ಪೂಜೆ ಸಲ್ಲಿಸಲು  ಬಸದಿಗಳಿಗೆ ತೆರಳಿದ್ದರು.

ಈ ಸಂದರ್ಭದಲ್ಲಿ ಕಳ್ಳರು ಎರಡು ಮನೆಗಳಿಗೆ ನುಗ್ಗಿ ಹಿಂಬಾಗಿಲಿನ ಚಿಲಕವನ್ನು ಮುರಿದು  ರತ್ನಾಕರ ಜೈನ್  ಮನೆ ಪ್ರವೇಶಿಸಿ 25 ಗ್ರಾಂ ಚಿನ್ನ ಮತ್ತು 20 ಸಾವಿರ ನಗದು ಹಾಗೂ ಧಿರೇಂದ್ರ ಹೆಗ್ಡೆ ಅವರ ಮನೆಯಿಂದ 20 ಗ್ರಾಂ ಚಿನ್ನ ಹಾಗೂ 60 ಸಾವಿರ ನಗದನ್ನು ದೋಚಿದ್ದಾರೆ.

ಈ ಬಗ್ಗೆ ಪೊಲೀಸ್ ನಿರೀಕ್ಷಕ ರಂಜನ್‌ ಕುಮಾರ್ ಪ್ರಕರಣ ದಾಖಲಿಸಿಕೊಂಡರು. ಪಣಂಬೂರು ಎಸ್ಪಿ ಮನೋಜ್ ಕುಮಾರ್  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ  ಪರಿಶೀಲನೆ ನಡೆಸಿದ್ದಾರೆ. ಹೈವೇ ರಸ್ತೆಯ ಬಳಿಯಲ್ಲೇ ಇರುವ ಎರಡೂ ಮನೆಗಳಿಗೆ ಹಗಲು ಹೊತ್ತಿನಲ್ಲಿ ಕಳ್ಳರು ನುಗ್ಗಿರುವುದು ಆಶ್ಚರ್ಯ ಮೂಡಿದ್ದು ಪರಿಚಿತರೇ ಈ ಕೃತ್ಯ ನಡೆಸಿರುವ ಸಂಶಯ ವ್ಯಕ್ತವಾಗಿದೆ.

- Advertisement -

Related news

error: Content is protected !!