- Advertisement -
- Advertisement -
ಮೂಡುಬಿದಿರೆ ವಲಯದ ಬೆಳುವಾಯಿ ಕ್ಲಸ್ಟರ್ ನ 17 ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಯಂಗಳದಲ್ಲಿ ಗಿಡ ನೆಡುವುದರ ಮೂಲಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಚಿತ್ರಕಲೆ ಎಲೆಗಳಿಂದ ವಿವಿಧ ವಿನ್ಯಾಸಗಳನ್ನು ರಚಿಸುವುದರ ಮೂಲಕ ಕರೋನ ಸಂದರ್ಭದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು.
ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಸನ್ನ ವಿ ಶೆಣೈ ಯವರು ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ಸಹಕಾರದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು.
- Advertisement -