- Advertisement -
- Advertisement -






ಮೂಡುಬಿದಿರೆ: ಬೈಕೊಂದು ರಸ್ತೆಯ ಹೊಂಡಕ್ಕೆ ಬಿದ್ದು ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 169 ರ ಮಿಜಾರಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಗಂಜಿಮಠ ನಿವಾಸಿ, ಅಬ್ದುಲ್ ಖಾದರ್(69) ಎಂದು ಗುರುತಿಸಲಾಗಿದೆ.
ಅಬ್ದುಲ್ ಖಾದರ್ ನಿನ್ನೆ ರಾತ್ರಿ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಹೊಂಡಕ್ಕೆ ಬಿದ್ದಿದ್ದಾರೆ. ಪರಿಣಾಮ ತಲೆ ಭಾಗಕ್ಕೆ ತೀವ್ರ ಗಾಯಗಳಾಗಿ ಮೃತಪಟ್ಟಿದ್ದಾರೆ. ಅವೈಜ್ಞಾನಿಕ ರಸ್ತೆ ಕಾಮಗಾರಿ ಈ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ.
- Advertisement -