- Advertisement -
- Advertisement -




ಬಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ತಾಯಿ-ಮಗಳು ಕೊಚ್ಚಿ ಹೋದ ಘಟನೆ ರಾಯಚೂರು ತಾಲೂಕಿನ ಬಿ.ಯದ್ಲಾಪೂರ ಗ್ರಾಮದಲ್ಲಿ ನಡೆದಿದೆ.
ಸುಜಾತಾ (27) ಹಾಗೂ ಶ್ರಾವಣಿ (10)ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ – ಮಗಳು .
ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ತಾಯಿ ಮೃತದೇಹ ಪತ್ತೆಯಾಗಿದೆ. ಸಧ್ಯ ಮಗಳು ಶ್ರಾವಣಿ ಪತ್ತೆಗೆ ಶೋಧ ಕಾರ್ಯ ನಡೆದಿದೆ. ಪ್ರತಿ ದಿನದಂತೆ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯುವಾಗ ಈ ದುರ್ಘಟನೆ ನಡೆದಿದೆ. ಈ ಘಟನೆ ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
- Advertisement -