Saturday, June 28, 2025
spot_imgspot_img
spot_imgspot_img

ಕಾಸರಗೋಡು: ಹಸುಗೂಸನ್ನು ಹತ್ಯೆಗೈದ ಪಾಪಿ ತಾಯಿ

- Advertisement -
- Advertisement -

ಕಾಸರಗೋಡು: ಒಂದೂವರೆ ತಿಂಗಳ ಹೆಣ್ಣು ಮಗುವನ್ನು ತಾಯಿ ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳ ಪಚ್ಲಂಪಾರೆ ಯಲ್ಲಿ ನಡೆದಿದೆ.

ಸುಮಂಗಲಿ – ಸತ್ಯನಾರಾಯಣ ದಂಪತಿ ಯ ಒಂದೂವರೆ ತಿಂಗಳ ಮೃತ ಪಟ್ಟ ಹಸುಗೂಸು. ತಾಯಿ ಮತ್ತು ಮಗು ನಾಪತ್ತೆ ಯಾದುದರಿಂದ
ಮನೆಯವರು ಹುಡುಕಾಡಿದಾಗ ತಾಯಿಯಾದ ಸುಮಂಗಲಿಯನ್ನು ಮನೆಯ ಅಲ್ಪ ದೂರದಲ್ಲಿ ಪತ್ತೆ ಹಚ್ಚಲಾಗಿದ್ದು, ಮಗು ನಾಪತ್ತೆಯಾಗಿತ್ತು. ವಿಚಾರಿಸಿದಾಗ ಮಗುವನ್ನು ಸಮೀಪದ ಬಯಲಿನಲ್ಲಿ ಕೆಸರು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಳು ಎನ್ನಲಾಗಿದೆ .ಕೂಡಲೇ ಆಕೆ ಹೆಲಿದ ಜಾಗಕ್ಕೆ ಹೋಗಿ ಮಗುವನ್ನು ಕೆಸರು ನೀರಿನಿಂದ ಮೇಲಕ್ಕೆತ್ತಿ ಉಪ್ಪಳದ ಮಂಗಲ್ಪಾಡಿ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮಗು ಮೃತಪಟ್ಟಿತ್ತು.

ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದು, ಮಹಿಳೆಯನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥೆತೆಯಂತೆ ವರ್ತಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೇರೆ ಯಾವುದಾದರೂ ಕಾರಣ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

- Advertisement -

Related news

error: Content is protected !!