




ಮುಡಾ ಹಗರಣದಲ್ಲಿ ಭಾಗಿಯಾದ ಸಿ ಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದು ತೀರ್ಪು ಪ್ರಕಟಿಸಿದ ಮಾನ್ಯ ಉಚ್ಚ್ಯ ನ್ಯಾಯಾಲಯದ ತೀರ್ಪನ್ನು ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಸ್ವಾಗತಿಸಿದೆ.
ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ಈ ಬಗ್ಗೆ ಮಾತನಾಡಿ ಮುಡಾ ಹಗರಣದಲ್ಲಿ ಭಾಗಿಯಾದ ಸಿ ಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದು ಮಹತ್ತರ ತೀರ್ಪು ಪ್ರಕಟಿಸಿದ ಮಾನ್ಯ ಉಚ್ಚ್ಯ ನ್ಯಾಯಾಲಯದ ತೀರ್ಪಿನ್ನು ಪುತ್ತೂರು ಬಿಜೆಪಿ ಸ್ವಾಗತಿಸುತ್ತದೆ. ಅಧಿಕಾರದ ಮದದಿಂದ ನಾನು ನಡೆದ್ದದೇ ದಾರಿ ಎಂದು ಅಘೋಷಿತ ತುರ್ತು ಪರಿಸ್ಥಿತಿಯ ಆಡಳಿತ ನಡೆಸುತ್ತಾ ಕರ್ನಾಟಕ ರಾಜ್ಯವನ್ನು ಲೂಟಿ ಮಾಡುತ್ತಿರುವ ಕಾಂಗ್ರೆಸ್ಗೆ ಇದು ನಿಶ್ಚಿತ ಪಾಠವಾಗಿದೆ. ನ್ಯಾಯಾಲಯದ ಈ ಮಹತ್ತರ ತೀರ್ಪಿನಿಂದ ನ್ಯಾಯಾಂಗ ವ್ಯವಸ್ಥೆಯ ನಂಬಿಕೆ ಬಲಗೊಂಡಿದೆ. ಸಂವಿಧಾನದ ಮೇಲೆ ನಿಜವಾದ ನಂಬಿಕೆ ಇರುವುದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು’ ಎಂದು ಅಗ್ರಹಿಸಿದ್ದಾರೆ.