- Advertisement -
- Advertisement -
ಮೂಡುಬಿದಿರೆ: ೨೦ ದಿನಗಳ ಹಿಂದೆ ನಾಪತ್ತೆಯಾಗಿದ್ದ ವೃದ್ಧರೊಬ್ಬರ ಶವವು ನಿಲ್ಲಿಸಿದ್ದ ಹಳೇ ಕಾರಿನೊಳಗಡೆ ಪತ್ತೆಯಾದ ಘಟನೆ ಜ್ಯೋತಿನಗರ ಗಾಂಧಿಪಾರ್ಕ್ ಬಳಿ ನಡೆದಿದೆ.
ಮೂಡಬಿದ್ರೆ ಪುರಸಭೆ ವ್ಯಾಪ್ತಿಯ ಕರಿಂಜೆ ಗ್ರಾಮ ನಿವಾಸಿ ಶ್ರೀಧರ ಶೆಟ್ಟಿ(73) ಸೆಪ್ಟೆಂಬರ್ 29ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಶ್ರೀಧರ ಶೆಟ್ಟಿ ಅವರ ಮಗ ರೋಹಿತ್ ಶೆಟ್ಟಿ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇಂದು ಜ್ಯೋತಿನಗರ ಮೆಸ್ಕಾಂ ಪರಿಸರದಲ್ಲಿ ದುರ್ವಾಸನೆಯಿಂದ ಕೂಡಿದ್ದು, ಸ್ಥಳೀಯರು ಕಾರಿನೊಳಗಡೆ ಶವ ಇರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -