- Advertisement -
- Advertisement -
ಮುಂಬೈ(ನ.15): ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಾದ್ ಪಟ್ಟಣದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಬಸ್ ಉರುಳಿ ಬಿದ್ದ ಪರಿಣಾಮ 5 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗೋವಾಕ್ಕೆ ಹೋಗುತ್ತಿದ್ದ ಬಸ್ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಸಂಚರಿಸುವ ವೇಳೆ ಈ ಘಟನೆ ನಡೆದಿದ್ದು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಈ ಕುರಿತು ಪ್ರಕರಣ ದಾಖಲಾಗಿದೆ.
- Advertisement -