Saturday, April 27, 2024
spot_imgspot_img
spot_imgspot_img

ಮುಂಬೈಗೆ ಪರಾರಿಯಾಗಲು ಯತ್ನಿಸುತ್ತಿದ್ದ ಹಿಂದೂ-ಮುಸ್ಲಿಂ ಜೋಡಿಯನ್ನು ತಡೆದ ಬಜರಂಗದಳದ ಕಾರ್ಯಕರ್ತರು!

- Advertisement -G L Acharya panikkar
- Advertisement -

ಮಂಗಳೂರು: ಖಚಿತ ಮಾಹಿತಿಯ ಮೇರೆಗೆ ಗುರುಪುರ ಕೈಕಂಬದಲ್ಲಿ ಮುಂಬೈಗೆ ಹೊರಟ ರೇಶ್ಮಾ ಬಸ್ಸನ್ನು ಮೂಡುಬಿದಿರೆಯಲ್ಲಿ ಇಲ್ಲಿನ ಭಜರಂಗದಳ ತಡೆದಿದೆ.

ಮಂಗಳೂರು ಭಜರಂಗದಳ ಕಾರ್ಯಕರ್ತರು ಖಚಿತ ಮಾಹಿತಿಯನ್ನು ಮೂಡುಬಿದಿರೆ ಭಜರಂಗದಳ ಕಾರ್ಯಕರ್ತರಿಗೆ ರವಾನಿಸಿದ್ದು ಈ ಮಾಹಿತಿಯ ಮೇರೆಗೆ ಬಸ್ ತಡೆದಿದ್ದಾರೆ. ಈ ಸಂದರ್ಭದಲ್ಲಿ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಪರಾರಿಯಾಗಲು ತಯಾರಾಗಿ ಬಂದಿದ್ದರು ಎನ್ನಲಾಗಿದೆ.

ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಈ ಇಬ್ಬರೂ ಮುಂಬೈಗೆ ಪರಾರಿಯಾಗಲು ಸಿದ್ದತೆ ನಡೆಸಿದ್ದರು. ಇದೀಗ ಮೂಡುಬಿದಿರೆ ಭಜರಂಗದಳ ಕಾರ್ಯಕರ್ತರ ಬಲೆಗೆ ಬಿದ್ದಿದ್ದು ಸದ್ಯ ಈ ಇಬ್ಬರೂ ಮೂಡುಬಿದಿರೆ ಪೊಲೀಸ್ ವಶದಲ್ಲಿದ್ದಾರೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದು ಸತ್ಯಾಂಶ ಇನ್ನಷ್ಟೇ ಹೊರಬರಬೇಕಿದೆ.

- Advertisement -

Related news

error: Content is protected !!