Sunday, July 19, 2026
spot_imgspot_img
spot_imgspot_img

ಮುಂಬೈ: ಒಂದೇ ಕುಟುಂಬದ ನಾಲ್ವರ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ –ಕಲ್ಲಂಗಡಿ ಹಣ್ಣಿನಲ್ಲಿ ಇಲಿ ಪಾಷಾಣ ಪತ್ತೆ..!

- Advertisement -
- Advertisement -

ಮುಂಬೈ: ಮಟನ್ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದಿದ್ದರಿಂದ ಫುಡ್ ಪಾಯಿಸನ್ ಆಗಿ ಮುಂಬೈನ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಅವರು ಮೃತಪಟ್ಟಿರುವುದು ಕಲ್ಲಂಗಡಿ ಹಣ್ಣಿನ ಸೇವನೆಯಿಂದಲ್ಲ, ಬದಲಾಗಿ ಇಲಿ ಪಾಷಾಣದಿಂದ ಎಂಬುದು ವಿಧಿವಿಜ್ಞಾನ ಪರೀಕ್ಷೆಯಿಂದ ದೃಢಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತರ ದೇಹದಲ್ಲಿ ಹಾಗೂ ಅವರು ತಿಂದಿದ್ದ ಕಲ್ಲಂಗಡಿ ಹಣ್ಣಿನ ಮಾದರಿಯಲ್ಲಿ ಇಲಿಗಳನ್ನು ಕೊಲ್ಲಲು ಬಳಸುವ ಝಿಂಕ್ ಫಾಸ್ಫೈಡ್ ಎಂಬ ವಿಷಕಾರಿ ರಾಸಾಯನಿಕದ ಅಂಶಗಳು ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯ ವೇಳೆ ಮೃತರ ಆಂತರಿಕ ಅಂಗಗಳು ಹಸಿರು ಬಣ್ಣಕ್ಕೆ ತಿರುಗಿರುವುದು ಕಂಡುಬಂದಿತ್ತು. ಇದು ವಿಷಪ್ರಾಶನದ ಸ್ಪಷ್ಟ ಲಕ್ಷಣವಾಗಿದ್ದು, ಇದೀಗ ವಿಧಿವಿಜ್ಞಾನ ವರದಿಯು ಸಾವಿನ ಅಸಲಿ ಕಾರಣವನ್ನು ಬಯಲು ಮಾಡಿದೆ.

ಅಬ್ದುಲ್ಲಾ ಡೊಕಾಡಿಯಾ (45), ಪತ್ನಿ ನಸ್ರೀನ್ (35), ಮಕ್ಕಳಾದ ಝೈನಬ್(13) ಮತ್ತು ಆಯೇಷಾ ಬಿರಿಯಾನಿ ಬಳಿಕ ಕಲ್ಲಂಗಡಿ ಹಣ್ಣು ತಿಂದು ತೀವ್ರ ವಾಂತಿ ಮತ್ತು ಭೇಧಿಯಿಂದ ಮೃತಪಟ್ಟಿದ್ದರು. ಈ ಕುಟುಂಬ ಮುಂಬೈನಲ್ಲಿರುವ ತಮ್ಮ ನಿವಾಸದಲ್ಲಿ ಸಂಬಂಧಿಕರಿಗೆ ಔತಣಕೂಟ ಏರ್ಪಡಿಸಿತ್ತು. ರಾತ್ರಿ ಊಟಕ್ಕೆ ಮಟನ್ ಬಿರಿಯಾನಿ ಬಡಿಸಲಾಗಿತ್ತು. ಊಟ ಮುಗಿಸಿ ಸಂಬಂಧಿಕರು ತೆರಳಿದ ಬಳಿಕ, ಮಧ್ಯರಾತ್ರಿ ಕುಟುಂಬದ ನಾಲ್ವರು ಕಲ್ಲಂಗಡಿ ಹಣ್ಣನ್ನು ತಿಂದಿದ್ದಾರೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ನಾಲ್ವರಿಗೂ ತೀವ್ರ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದ್ದು, ಕೆಲವೇ ಗಂಟೆಗಳಲ್ಲಿ ಎಲ್ಲರೂ ಪ್ರಾಣಬಿಟ್ಟಿದ್ದರು.

ವಿಧಿವಿಜ್ಞಾನ ವರದಿಯ ಪ್ರಕಾರ, ನಾಲ್ವರ ಸಾವಿಗೆ ಝಿಂಕ್ ಫಾಸ್ಫೈಡ್(ಇಲಿಪಾಷಾಣ) ಕಾರಣ. ವೈದ್ಯರು ಮೃತರ ದೇಹ ಹಾಗೂ ಕಲ್ಲಂಗಡಿ ಹಣ್ಣು ಎರಡರಲ್ಲೂ ಈ ರಾಸಾಯನಿಕವನ್ನು ಪತ್ತೆಹಚ್ಚಿದ್ದಾರೆ. ಅಲ್ಲದೇ ಕಳೆದ ವಾರ ನಡೆಸಲಾದ ಪ್ರಾಥಮಿಕ ಪರೀಕ್ಷೆಯಲ್ಲಿ ಮೃತರ ಮೆದುಳು, ಹೃದಯ ಮತ್ತು ಕರುಳು ಸೇರಿದಂತೆ ಆಂತರಿಕ ಅಂಗಗಳು ಹಸಿರು ಬಣ್ಣಕ್ಕೆ ತಿರುಗಿರುವುದು ಕಂಡುಬಂದಿತ್ತು.

ಕಲ್ಲಂಗಡಿ ಹಣ್ಣಿಗೆ ಆಕಸ್ಮಿಕವಾಗಿ ಇಲಿಪಾಷಾಣ ಬೆರೆತಿದೆಯೋ ಅಥವಾ ಯಾರಾದರೂ ಉದ್ದೇಶಪೂರ್ವಕವಾಗಿ ಹಣ್ಣಿನೊಳಗೆ ಇಂಜೆಕ್ಷನ್ ಮೂಲಕ ವಿಷವನ್ನು ಸೇರಿಸಿದ್ದಾರೋ ಎಂಬ ಆಯಾಮದಲ್ಲಿ ಮುಂಬೈ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!