- Advertisement -
- Advertisement -
ಉಡುಪಿ: ನಗರಸಭೆಯಿಂದ ಕಸ ಸಂಗ್ರಹಿಸುವ ಕಾರ್ಮಿಕ ರೊಬ್ಬರಿಗೆ ಹಲ್ಲೆ ನಡೆಸಿರುವ ಘಟನೆ ನಗರದ ಸಿಟಿ ಬಸ್ ನಿಲ್ದಾಣದ ಪ್ರದೇಶದಲ್ಲಿ ನಡೆದಿದೆ.
ಈ ಹಿನ್ನೆಲೆ ಇಂದು ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದ ಇಲೆಕ್ಟ್ರಾನಿಕ್ಸ್ ಅಂಗಡಿಯ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಬಾಗಲಕೋಟೆ ಮೂಲದ ನಿಟ್ಟೂರು ನಿವಾಸಿ ಸಂಜು ಮಾದರ್(26) ಎಂಬವರು ಹಲ್ಲೆಗೊಳಗಾದ ಕಾರ್ಮಿಕ. ಆರೋಪಿಗಳನ್ನು ನೇಜಾರಿನ ಇಸ್ಮಾಯಿಲ್ ಹಾಗೂ ಹೂಡೆಯ ಸೊಹೇಲ್ ಎಂದು ಗುರುತಿಸಲಾಗಿದೆ.
ನಗರದ ಸಿಟಿ ಬಸ್ ನಿಲ್ದಾಣದ ಪ್ರದೇಶದ ಕಸ ಸಂಗ್ರಹಕ್ಕೆ ವಾಹನದೊಂದಿಗೆ ಸಂಜು ತೆರಳಿದ್ದು, ಈ ಅಂಗಡಿಯಲ್ಲಿ ಹಸಿ ಮತ್ತು ಒಣ ಕಸ ಮಿಕ್ಸ್ ಮಾಡಿ ನೀಡಿರುವುದಕ್ಕೆ ಸಂಜು ಆಕ್ಷೇಪ ವ್ಯಕ್ತಪಡಿಸಿದ್ದನು.
ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಇಸ್ಮಾಯಿಲ್ ಮತ್ತು ಸೊಹೇಲ್, ಸಂಜುವಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -