Tuesday, May 21, 2024
spot_imgspot_img
spot_imgspot_img

ಮುರುಘಾ ಶ್ರೀ ಪುನಃ ಚಿತ್ರದುರ್ಗದ ಸೆಂಟ್ರಲ್ ಜೈಲಿಗೆ

- Advertisement -G L Acharya panikkar
- Advertisement -
This image has an empty alt attribute; its file name is shri-energy-solar-667x1024.jpeg
This image has an empty alt attribute; its file name is VC_PUC_-1-819x1024.jpg

ಪೋಕ್ಸೋ ಪ್ರಕರಣಗಳಲ್ಲಿ ಜೈಲು ಸೇರಿ ಜಾಮೀನು ಪಡೆದು ಹೊರಬಂದಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧೀಶ ಡಾ ಶಿವಮೂರ್ತಿ ಮುರುಘಾ ಶರಣರನ್ನು ಪುನಃ ಜೈಲಿಗೆ ಕರೆದೊಯ್ಯಲಾಯಿತು.

ಸುಪ್ರೀಂ ಕೋರ್ಟ್ ಆದೇಶದಂತೆ ಒಂದನೇ ಅಪರ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರ ಮುಂದೆ ಶರಣಾಗಿದ್ದ ಮುರುಘಾ ಶ್ರೀಗೆ ಮೇ 27ರವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿ ನಗರದ ಸೆಂಟ್ರಲ್ ಜೈಲಿಗೆ ಕರೆದೊಯ್ದರು. ಜೈಲಿಗೆ ಒಯ್ಯುವ ಮೊದಲು ವೈದ್ಯಕೀಯ ತಪಾಸಣೆಗಾಗಿ ಸ್ವಾಮೀಜಿಯನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅವರ ವಿಚಾರಣೆಯನ್ನು ಮೇ 27 ರಂದು ನಡೆಸಲು ನ್ಯಾಯಾಲಯ ಸೂಚಿಸಿದೆ. 14 ತಿಂಗಳು ಜೈಲು ಅನುಭವಿಸಿದ ಬಳಿಕ ರಾಜ್ಯ ಉಚ್ಛ ನ್ಯಾಯಾಲಯವು ನವೆಂಬರ್ 15, 2023 ರಂದು ಮುರುಘಾ ಶರಣರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

- Advertisement -

Related news

error: Content is protected !!