- Advertisement -
- Advertisement -


ಹೆಸ್ಕಾಂ ಬಿಲ್ ಕಲೆಕ್ಟರ್ನೊಬ್ಬನನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆಗೈದ ಘಟನೆ ಧಾರವಾಡ ಹೊರವಲಯದ ಹಳಿಯಾಳ್ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ರಜಾಕ್ ಕವಲಗೇರಿ ಎಂಬಾತನೇ ಹತ್ಯೆಯಾದ ವ್ಯಕ್ತಿಯಾಗಿದ್ದಾನೆ.
ಕೊಲೆಯಾದ ರಜಾಕ್ ಹೆಸ್ಕಾಂ ಬಿಲ್ ಕಲೆಕ್ಟರ್ ಆಗಿದ್ದರು. ಕೆಲಸ ಮುಗಿಸಿ ಬೈಕ್ ಮೇಲೆ ವಾಪಸ್ ಹೋಗುವಾಗ ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಕೊಲೆ ಮಾಡಿದ್ದಾರೆ. ಮೃತ ರಜಾಕ್ ಧಾರವಾಡ ತಾಲೂಕಿನ ಬಾಡ ಗ್ರಾಮದವರಾಗಿದ್ದು, ಹಳಿಯಾಳ ರಸ್ತೆಯ ಬೈಪಾಸ್ ಸೇತುವೆ ಬಳಿ ಬೈಕ್ ಮೇಲೆ ಯುವಕರು ಬಂದಿದ್ದರು, ಈ ವೇಳೆ ರಜಾಕ್ನನ್ನ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -