Friday, March 29, 2024
spot_imgspot_img
spot_imgspot_img

ವ್ಯಕ್ತಿಯ ಬರ್ಬರ ಹತ್ಯೆ

- Advertisement -G L Acharya panikkar
- Advertisement -

ಮಂಗಳೂರಿನ ಹೊರವಲಯದ ಕಾವೂರು ಬಳಿ ವ್ಯಕ್ತಿಯೊಬ್ಬನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಇದೀಗ ನಡೆದಿದೆ.

ಕಾವೂರಿನ ಮಲ್ಲಿ ಲೇಔಟ್ ನಲ್ಲಿ ಈ ಕೊಲೆ ನಡೆದಿದ್ದು, ಮೃತ ವ್ಯಕ್ತಿಯನ್ನು ಸುರೇಂದ್ರ ಎಂದು ಗುರುತಿಸಲಾಗಿದ್ದು, ಪೋಲಿಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಕೇರಳ ಮೂಲದ ಸುರೇಂದ್ರನ್ ಅವರು ಹಲವು ವರ್ಷಗಳಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು. ಮಂಗಳವಾರ ಸುರೇಂದ್ರನ್ ನಗರಕ್ಕೆ ಹೋಗಿದ್ದರೆ, ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರ ನೋಡಿಕೊಳ್ಳಲು ತೆರಳಿದ್ದರು. ಮಧ್ಯಾಹ್ನ 1 ಗಂಟೆ ವೇಳೆಗೆ ಸುರೇಂದ್ರನ್ ಅವರು ಮನೆಗೆ ಮರಳಿ ಬಂದಿದ್ದು, ಆ ಬಳಿಕ ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!