Friday, June 27, 2025
spot_imgspot_img
spot_imgspot_img

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯ ಕೊಲೆ ಪ್ರಕರಣ : 24 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪೋಲಿಸರು, ಆರೋಪಿ ಅರೆಸ್ಟ್‌

- Advertisement -
- Advertisement -

ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ 14 ವರ್ಷದ ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣವನ್ನು ಪಣಂಬೂರು ಪೋಲಿಸರು ಘಟನೆ ನಡೆದ 24 ಗಂಟೆಗಳ ಒಳಗೆ ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ‌.

ಬಂಧಿತ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ನಿವಾಸಿ, ಪ್ರಸ್ತುತ ಜೋಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಫಕ್ಕೀರಪ್ಪ ಹಣಮಪ್ಪ ಮಾದರ (51) ಎಂದು ಗುರುತಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಚಿಕ್ಕಪ್ಪ ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ:67/2024 ಕಲಂ:103 (1) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ಜಾರಿಯಲ್ಲಿದೆ.

ಆರೋಪಿಯು ಕಳೆದ ಆರು ತಿಂಗಳಿನಿಂದ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆ ಪರಿಸರದಲ್ಲಿ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದು, ಕೊಲೆಗೆ ಕಾರಣವೇನೆಂದು ಪೋಲಿಸರು ಖಚಿತಪಡಿಸಿಲ್ಲ‌.
ಈ ಪ್ರಕರಣವನ್ನು ಅತೀ ಶೀಘ್ರದಲ್ಲಿ ಭೇದಿಸುವಲ್ಲಿ ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಐ.ಪಿ.ಎಸ್. ರವರ ಮಾರ್ಗದರ್ಶನದಂತೆ, ಸಿದ್ದಾರ್ಥ ಗೋಯಲ್, ಐ.ಪಿ.ಎಸ್. ಡಿ.ಸಿ.ಪಿ (ಕಾನೂನು ಮತ್ತು ಸುವ್ಯವಸ್ಥೆ), ಬಿ.ಪಿ ದಿನೇಶ್ ಕುಮಾರ್ ಡಿ.ಸಿ.ಪಿ. (ಅಪರಾಧ ಮತ್ತು ಸಂಚಾರ ವಿಭಾಗ), ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ರವೀಶ್ ನಾಯಕ್ (ಪ್ರಭಾರ) ಮತ್ತು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಮನೋಜ್ ಕುಮಾರ್ ನಾಯ್ ರವರ ಮಾರ್ಗದರ್ಶನದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್, ಪಣಂಬೂರು ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆ ವಿಭಾಗದ ಉಪನಿರೀಕ್ಷಕಿ ಶ್ರೀಮತಿ ಶ್ರೀಕಲಾ ಕೆ.ಟಿ ಹಾಗೂ ಸಿಬ್ಬಂದಿಗಳಾದ ಎ.ಎಸ್.ಐ. ಕೃಷ್ಣ, ಬಿ.ಕೆ. ಹೆಚ್.ಸಿ.ಗಳಾದ ಸತೀಶ್ ಎಮ್ ಆರ್, ಸಯ್ಯದ್ ಇಂತಿಯಾಜ್, ಸಿಪಿಸಿ ಗಳಾದ ಶಶಿಕುಮಾರ್, ರಾಕೇಶ್ ರವರುಗಳು ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.

- Advertisement -

Related news

error: Content is protected !!