Wednesday, May 15, 2024
spot_imgspot_img
spot_imgspot_img

ಆಟೋ ಚಾಲಕನ ಭೀಕರ ಕೊಲೆ

- Advertisement -G L Acharya panikkar
- Advertisement -

ಆಟೋ ಚಾಲಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ನಂದಿನಿ ಲೇಔಟ್ ಬಳಿಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ

ಲಗ್ಗೆರೆ ಭಾಗದಲ್ಲಿ ಆಟೋ ಓಡಿಸುತ್ತದ್ದ ರಘು (28) ಮೃತ ದುರ್ದೈವಿ. ರಘು ಆಟೋದಲ್ಲಿ ಕೂತಿದ್ದ ಸಮಯ ಕೆಲ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಕೊಲೆಯ ಹಿಂದೆ ಯಾವುದಾದರೂ ವೈಯಕ್ತಿಕ ದ್ವೇಷವಿತ್ತೇ ಅಥವಾ ದುಷ್ಕರ್ಮಿಗಳು ಪಾನಮತ್ತರಾಗಿದ್ದರೇ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದು, ಹತ್ತಿರದ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.ಕೊಲೆಯ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ಪೊಲೀಸರಿಗೆ ಸ್ಪಷ್ಟವಾಗಿಲ್ಲ.

ನಂದಿನಿ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!