Monday, April 29, 2024
spot_imgspot_img
spot_imgspot_img

ಮುರುಡೇಶ್ವರ ಸಮುದ್ರದಲ್ಲಿ ಸ್ನೇಹಿತರೊಂದಿಗೆ ಈಜುತ್ತಿರುವಾಗ ಮುಳುಗಿ ಯುವಕ ಮೃತ್ಯು

- Advertisement -G L Acharya panikkar
- Advertisement -

ಭಟ್ಕಳ: ಮುರುಡೇಶ್ವರದ ಸಮುದ್ರದಲ್ಲಿ ಬೆಂಗಳೂರಿನ ಯುವಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ರವಿವಾರ ನಡೆದಿದೆ. ಮೃತ ಯುವಕನನ್ನು ಬೆಂಗಳೂರಿನ ಬಾಣಸಂದ್ರ ನಿವಾಸಿ ಮಂಜುನಾಥ್ ವೆಂಕಟೇಶ್ ಮಡಿವಾಳ (20) ಎಂದು ಗುರುತಿಸಲಾಗಿದೆ.

ತನ್ನ ಏಳು ಮಂದಿ ಸ್ನೇಹಿತರೊಂದಿಗೆ ಈಜುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮಂಜುನಾಥ್ ಬೆಂಗಳೂರಿನಲ್ಲಿ ವೈದ್ಯಕೀಯ ಸೇವೆಯಲ್ಲಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿರುವ ಅವರ ಕುಟುಂಬ ಸದಸ್ಯರಿಗೆ ಘಟನೆ ಕುರಿತಂತೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!