- Advertisement -
- Advertisement -
ಮೈಸೂರು: ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದು. ಎಸಿಎಫ್ ಶಿವಶಂಕರ್ ಮನೆ ಮೇಲೆ ದಾಳಿ ನಡೆಸಿದ್ದಾರೆ ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಮೈಸೂರು ಅರಣ್ಯ ಭವನದಲ್ಲಿ ಶಿವಶಂಕರ್ ಎಸಿಎಫ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿವಶಂಕರ್ ಮನೆ ಸೇರಿ ಏಕಕಾಲದಲ್ಲಿ 5 ಕಡೆ ದಾಳಿ ನಡೆಸಿ ಶೋಧಕಾರ್ಯ ನಡೆಸಲಾಗುತ್ತಿದೆ.
ಶಿವಶಂಕರ್ಗೆ ಸೇರಿದ ನಜರ್ಬಾದ್, ಸರಸ್ವತಿಪುರಂ, ಜೆ ಸಿ ಬಡವಣೆ, ಮಳವಳ್ಳಿಯಲ್ಲಿರುವ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
- Advertisement -