Tuesday, April 23, 2024
spot_imgspot_img
spot_imgspot_img

ಇಂದಿನಿಂದ ನಾಲ್ಕು ದಿನಗಳ ಕಾಲ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ

- Advertisement -G L Acharya panikkar
- Advertisement -

ಮೈಸೂರು: ನಾಡಹಬ್ಬ ದಸರಾ ಸಮೀಪಿಸುತ್ತಿರುವ ಹೊತ್ತಲ್ಲೇ, ಇಂದಿನಿಂದ ನಾಲ್ಕು ದಿನಗಳ ಕಾಲ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದೆ.

ಇಂದಿನಿಂದ 18ನೇ ತಾರೀಖಿನವರೆಗೆ ಹಾಗೂ ಮತ್ತೆ ಅಕ್ಟೋಬರ್ 23ರಿಂದ ನವೆಂಬರ್ 1ರವರೆಗೆ ಚಾಮುಂಡಿ ಬೆಟ್ಟದ್ದಲ್ಲಿ ದೇವರ ದರ್ಶನ ರದ್ದು ಮಾಡಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಕೊರೊನ ಸೋಂಕು ಹರಡದಂತೆ, ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಎಂದಿನಂತೆ ಪೂಜಾ ಕೈoಕರ್ಯ ನೆರವೇರಲಿದೆ.

ಅಕ್ಟೋಬರ್.17 ದಸರಾ ಉದ್ಘಾಟನೆಗೆ ಆಹ್ವಾನಿತರಿಗೆ ಮಾತ್ರ ಪ್ರವೇಶ ಇರಲಿದೆ. ಅ.15ರಿಂದ ಉದ್ಘಾಟನೆಗೆ ಪೂರ್ವ ಸಿದ್ಧತೆ ನಡೆಯಲಿದ್ದು, ಈ ವೇಳೆ ಸಿದ್ದತಾ ಕಾರ್ಯದಲ್ಲಿ ತೊಡಗಿಸಿ ಕೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮಾತ್ರ ಪ್ರವೇಶವಿದೆ. ಗ್ರಾಮಸ್ಥರು ಹೊರತುಪಡಿಸಿ, ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

- Advertisement -

Related news

error: Content is protected !!