Saturday, June 20, 2026
spot_imgspot_img
spot_imgspot_img

ಮೈಸೂರು: ಕಬಿನಿ ಜಲಾಶಯಕ್ಕೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ

- Advertisement -
- Advertisement -

ಮೈಸೂರು: ಹೆಚ್.ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು‌ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು.

ಬಾಗಿನ ಸಮರ್ಪಿಸಿ ನಾಡಿನ ಒಳಿತಿಗಾಗಿ ಹಿರಿಯ ನಾಯಕರು ಪ್ರಾರ್ಥನೆ ಸಲ್ಲಿಸಿದರು. ಸಚಿವ ಡಾ.ಹೆಚ್.ಸಿ ಮಹದೇವಪ್ಪ, ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಕಾಂಗ್ರೆಸ್‌ನ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ದೆಹಲಿ ಭೇಟಿ ವಿಚಾರ ಪ್ರಸ್ತಾಪಿಸಿದರು. ಸಿಎಂಗೆ ಹೇಳಿಯೇ ನಿನ್ನೆ ದೆಹಲಿಗೆ ಹೋಗಿದ್ದೆ. ನಾನು ನನ್ನ ವೈಯುಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ. ಯಾವ ರಾಜಕೀಯಕ್ಕೂ ಹೋಗಿರಲಿಲ್ಲ. ದೆಹಲಿಯಲ್ಲಿ ವಕೀಲರ ಜೊತೆ ಸಮಯ ನಿಗದಿಯಾಗಿತ್ತು. ಅದಕ್ಕಾಗಿ ಹೋಗಿ ಬಂದೆ. ಅದನ್ನು ಮುಗಿಸಿಕೊಂಡು ರಾತ್ರಿಯೇ ವಾಪಸ್ ಬಂದಿದ್ದೇನೆ ಎಂದು ತಿಳಿಸಿದರು.

ಬಿಜೆಪಿಯವರಿಗೆ ನನ್ನ ಬಗ್ಗೆ ಪ್ರೀತಿ ಜಾಸ್ತಿ. ಮೋರ್ ಸ್ಟ್ರಾಂಗ್ ಮೋರ್ ಲವ್ ಆಲ್ಸೋ. ನಿನ್ನೆ ನನ್ನ ಬೆಂಗವಾಲು ವಾಹನ ಪಲ್ಟಿ ಆಯ್ತು. ಬಹಳ ಸೀರಿಯಸ್‌ ಅಪಘಾತ ಆಯ್ತು. ಚಾಮುಂಡೇಶ್ವರಿ ದೇವಿ ಕೃಪೆಯಿಂದ ದೊಡ್ಡ ಅನಾಹುತ ಆಗಲಿಲ್ಲ ಎಂದು ಹೇಳಿದರು.

- Advertisement -

Related news

error: Content is protected !!