- Advertisement -
- Advertisement -
ಮೈಸೂರು: ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಇಂದು ಅಧಿಕಾರ ಸ್ವೀಕಾರ ಮಾಡಿದರು. ನಾಡ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಅಧಿಕಾರ ವಹಿಸಿಕೊಂಡಿದ್ದಾರೆ.
ತಿಂಗಳ ಹಿಂದಷ್ಟೇ ಜಿಲ್ಲೆಗೆ ಆಗಮಿಸಿದ್ದ ಜಿಲ್ಲಾಧಿಕಾರಿ ಶರತ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ವಿಶ್ವವಿಖ್ಯಾತ ದಸರಾಗೆ ಅರಮನೆ ನಗರಿ ಸಜ್ಜಾಗುತ್ತಿರುವ ವೇಳೆ ಜಿಲ್ಲಾಧಿಕಾರಿ ಬದಲಾವಣೆ ಮಾಡಿ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿಗೆ ಜವಾಬ್ದಾರಿ ನೀಡಲಾಗಿದೆ.
- Advertisement -