Sunday, June 29, 2025
spot_imgspot_img
spot_imgspot_img

ಅಕ್ರಮವಾಗಿ ಆನೆದಂತಗಳ ಮಾರಾಟ ಯತ್ನ-ನಾಲ್ವರ ಬಂಧನ

- Advertisement -
- Advertisement -

ಮೈಸೂರು(ನ.3): ಮೈಸೂರು ಬನ್ನಿಮಂಪಟದ ಕೆಳಸೇತುವೆ ಬಳಿ ದಂತಚೋರರು 4 ಆನೆದಂತಗಳನ್ನ 8 ಭಾಗಗಳನ್ನಾಗಿ ಮಾಡಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಅರಣ್ಯ ಸಂಚಾರ ದಳದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 25 ಕೆ.ಜಿ ತೂಕದ ಆನೆದಂತಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ತಿರುವನಂತಪುರದ ಪ್ರೆಸ್ಟಿನ್ ಸೆಲ್ವ, ಜಯಪ್ರಕಾಶ್‌ ಹಾಗೂ ಉದಯಗಿರಿಯ ನಿವಾಸಿಗಳಾದ ಮೋಹನ್ ಮತ್ತು ರಮೇಶ್ ಎಂದು ಗುರುತಿಸಲಾಗಿದೆ. ಇವರು ದಂತಗಳನ್ನು ಒಂದು ಕೆ.ಜಿಗೆ 20 ಸಾವಿರದಂತೆ ಮಾರಾಟ ಮಾಡುತ್ತಿದ್ದರು. ಇವರಲ್ಲಿ ಪ್ರೆಸ್ಟಿನ್ ಸೆಲ್ವ ವಿರುದ್ಧ ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ. ರಮೇಶ್ ಮತ್ತು ಮೋಹನ್ ವಿಗ್ರಹ ಕೆತ್ತುವ ಕಲಾವಿದರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -

Related news

error: Content is protected !!