Monday, June 30, 2025
spot_imgspot_img
spot_imgspot_img

ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ ಚಿನ್ನಾಭರಣ ಕದ್ದ ಖದೀಮ; ಆರೋಪಿ ಸೆರೆ!

- Advertisement -
- Advertisement -

ಮೈಸೂರು: ತಾನು ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ ಚಿನ್ನ ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸಿದ ಘಟನೆ ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿಯನ್ನು ಶಿವರಾಮ್ ಎನ್ನಲಾಗಿದೆ. ಆತನಿಂದ 25 ಲಕ್ಷ ರೂ. ಮೌಲ್ಯದ 503 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ಶಿವರಾಮ್ ಜೆ.ಎಲ್.ಬಿ.ರಸ್ತೆಯ ಪಾರಸ್ ಪೃಥ್ವಿ ಜುವೆಲ್ಲರಿ ಅಂಗಡಿಯಲ್ಲಿ ಕಳೆದ 9 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ತಾನು ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ ಕಳ್ಳತನ ಮಾಡಿ ನಾಪತ್ತೆಯಾಗಿದ್ದನು.

ಈ ಸಂಬಂಧ ಶಿವರಾಮ್ ಮೇಲೆ ಅನುಮಾನಗೊಂಡು ಅಂಗಡಿ ಮಾಲೀಕ ದೂರು ದಾಖಲಿಸಿದ್ದರು. ಈ ವೇಳೆ ಶಿವರಾಮ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾನು ಚಿನ್ನ ಕದ್ದಿರುವುದನ್ನು ಒಪ್ಪಿಕೊಂಡಿದ್ದಾನೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!