Monday, June 30, 2025
spot_imgspot_img
spot_imgspot_img

ಮೈಸೂರು: ಕಬಿನಿ ಹಿನ್ನೀರು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅವಘಡ- ಧಗ ಧಗಿಸುತ್ತಿರುವ ವಿಶಾಲವಾದ ಕಾಡು!

- Advertisement -
- Advertisement -

ಮೈಸೂರು: ಕಬಿನಿ ಹಿನ್ನೀರು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ವಿಶಾಲವಾದ ಕಾಡು ಧಗ ಧಗಿಸುತ್ತಿದೆ.

ಜಿಲ್ಲೆಯ ನಾಗರಹೊಳೆ ಅಭಯಾರಣ್ಯದ ಕಬಿನಿ ಜಲಾಶಯದಲ್ಲಿ ಕಬಿನಿ ಹಿನ್ನೀರು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಇಡೀ ಕಾಡಿಗೆ ವ್ಯಾಪಿಸಿದೆ.

ಧಗ ಧಗಿಸುತ್ತಿರುವ ಬೆಂಕಿಯನ್ನು ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಅರಣ್ಯಕ್ಕೆ ಬೆಂಕಿ ತಗಲಲು ಕಾರಣ ಏನೆಂಬುದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!