- Advertisement -
- Advertisement -
ವ್ಯಾಪಾರಕ್ಕೆಂದು ಸುಡಾನ್ಗೆ ತೆರಳಿದ್ದ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಪಕ್ಷಿರಾಜಪುರದ ಹಕ್ಕಿಪಿಕ್ಕಿ ಜನಾಂಗದ ಮಹಿಳೆ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ.
ಮೃತಪಟ್ಟ ಮಹಿಳೆ ನಂದಿನಿ ಎಂದು ಗುರುತಿಸಲಾಗಿದೆ.
ನಂದಿನಿ ಅವರು ಸುಡಾನ್ಗೆ ವ್ಯಾಪಾರಕ್ಕಾಗಿ ತೆರಳಿದ್ದರು. ನಂದಿನಿ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಕ್ಷಿರಾಜಪುರದಲ್ಲಿ ನಂದಿನಿ ಪತಿ ಹಾಗೂ ಮಕ್ಕಳು ವಾಸವಾಗಿದ್ದು, ಮೃತದೇಹನ್ನು ದೇಶಕ್ಕೆ ಕರೆತರುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸುಡಾನ್ನಲ್ಲಿರುವ ಭಾರತದ ರಾಯಭಾರಿ ಜೊತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮಾತನಾಡಿದ್ದು, ನಂದಿನಿ ಶವ ಹುಣಸೂರಿಗೆ ಕರೆತರುವ ಸಾಧ್ಯತೆ ಇದೆ.
- Advertisement -