- Advertisement -
- Advertisement -
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತಕ್ಕೀಡಾಗಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ. ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತ ವಿದ್ಯಾರ್ಥಿನಿ.
ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದಳು. ಮಗಳು ಪರೀಕ್ಷೆ ಬರೆದು ವಾಪಸ್ ಬರುತ್ತಾಳೆ ಎಂದು ಕಾಯುತ್ತಿದ್ದ ಪೋಷಕರಿಗೆ ಈ ಸುದ್ದಿ ಕೇಳಿ ಆಘಾತವಾಗಿದೆ.
- Advertisement -