Thursday, April 25, 2024
spot_imgspot_img
spot_imgspot_img

ಮೈಸೂರಿನಲ್ಲಿ ಪ್ರವಾಸಿ ತಾಣಗಳ ಪ್ರವೇಶಕ್ಕೆ ಅವಕಾಶ

- Advertisement -G L Acharya panikkar
- Advertisement -

ಮೈಸೂರು (ಅ17): ಕೋವಿಡ್ – 19 ಹಿನ್ನೆಲೆ ಕೆಆರ್ ಎಸ್, ಮೈಸೂರು ಮೃಗಾಲಯ, ಚಾಮುಂಡಿ ಬೆಟ್ಟ ಹಾಗೂ ಅರಮನೆಗಳಿಗೆ ಪ್ರವಾಸಿಗರನ್ನು ದಸರಾ ಮುಗಿಯುವವರೆಗೆ ಪ್ರವೇಶ ನಿರ್ಬಂಧ ಹೇರಿರುವ ಜಿಲ್ಲಾಡಳಿತದ ಕ್ರಮವನ್ನು ಮುಖ್ಯಮಂತ್ರಿಗಳು ಹಿಂಪಡೆಯುವಂತೆ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳು ಶುಕ್ರವಾರ ಸಭೆ ನಡೆಸುವ ವೇಳೆ ಈ ಬಗ್ಗೆ ವಿವರಣೆ ಪಡೆದು, ಈ ಆದೇಶವನ್ನು ಹೊರಡಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಮಾಸ್ಕ್ ಗಳನ್ನು ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಎಲ್ಲರಿಗೂ ಪ್ರವೇಶವನ್ನು ನೀಡಲು ಸೂಚನೆ ನೀಡಿದ್ದಾರೆಂದು ಸಚಿವ ಸೋಮಶೇಖರ್ ತಿಳಿಸಿದರು.

ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿದ ಕ್ರಮವನ್ನು ಮೈಸೂರು ಹೋಟೆಲ್ ಮಲಿಕರು, ಕ್ಯಾಬ್ ಚಾಲಕರು, ಟ್ಯಾಕ್ಸಿ ಚಾಲಕರು, ಟೂರಿಸ್ಟ್ ಗೈಡ್, ಆಟೋ ಚಾಲಕರು ಸೇರಿದಂತೆ ಹಲವು ಸಂಘಗಳು ಖಂಡಿಸಿ, ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದವು.

- Advertisement -

Related news

error: Content is protected !!