Saturday, June 28, 2025
spot_imgspot_img
spot_imgspot_img

ನಾಗಮಂಗಲ ಗಲಭೆ ಪ್ರಕರಣ​: ಬಂಧನ ಭೀತಿಯಲ್ಲಿದ್ದ ಯುವಕ ಸಾವು

- Advertisement -
- Advertisement -

ನಾಗಮಂಗಲ ಗಲಭೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಸಾವಿಗೀಡಾಗಿರುವ ಘಟನೆ ನಡೆದಿದೆ.

ನಾಗಮಂಗಲದ ಬದ್ರಿಕೊಪ್ಪಲು ಗ್ರಾಮದ ಕಿರಣ್ (23) ಸಾವನ್ನಪ್ಪಿದ ಯುವಕ.

ನಾಗಮಂಗಲ ತಾಲೂಕಿನ ಬದ್ರಿಕೊಪ್ಪಲು ಗ್ರಾಮದ ನಿವಾಸಿ ಕಿರಣ್​ ಸೆಪ್ಟೆಂಬರ್ 11ರ ರಾತ್ರಿ ಗಲಭೆ ನಂತರ ಗ್ರಾಮ ತೊರೆದಿದ್ದ. ಆದರೆ ನಿನ್ನೆ ಕಿರಣ್​ಗೆ ಬ್ರೈನ್ ಸ್ಟ್ರೋಕ್ ಆಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಮೃತ ಕಿರಣ್ ತಂದೆ ಬಂಧನವಾಗಿದ್ದಾರೆ. ಕುಮಾರ್ ಪ್ರಕರಣದ ಎ17 ಆರೋಪಿಯಾಗಿದ್ದಾರೆ.

- Advertisement -

Related news

error: Content is protected !!