Thursday, June 18, 2026
spot_imgspot_img
spot_imgspot_img

ಸಿಬಿಐ ದಾಳಿ ಖಂಡಿಸುವ ಡಿಕೆಶಿ ಅಕ್ರಮವನ್ನು ಯಾಕೆ ಖಂಡಿಸುವುದಿಲ್ಲ: ನಳೀನ್​ ಕುಮಾರ್​ ಕಟೀಲ್

- Advertisement -
- Advertisement -

ಬೆಂಗಳೂರು: ಸಿಬಿಐ ದಾಳಿಯನ್ನು ಖಂಡಿಸುವ ಕೆಪಿಸಿಸಿಯು ತಮ್ಮ ಪಕ್ಷದ ರಾಜ್ಯಾಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ಅಕ್ರಮಗಳನ್ನು ಯಾಕೆ ಖಂಡಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್ ಕಾಂಗ್ರೆಸ್​ಗೆ ಪ್ರಶ್ನಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಮೇಲೆ ಇಡಿ, ಐಟಿ ಸ್ವಾಯತ್ತ ಸಂಸ್ಥೆಗಳು ಈಗಾಗಲೇ ತನಿಖೆ ಮಾಡುತ್ತಿದ್ದು, ಅದು ವಿವಿಧ ಹಂತಗಳಲ್ಲಿ ವಿಚಾರಣೆಯಲ್ಲಿದೆ. ಹೀಗಿರುವಾಗ ಸಿಬಿಐ ತನ್ನ ಕೆಲಸ ಮಾಡುತ್ತಿದ್ದು, ಅದಕ್ಕೆ ಸಹಕಾರ ನೀಡುವ ಬದಲು ಸಿಬಿಐ ಅಧಿಕಾರಿಗಳ ವಾಹನಗಳ ಮೇಲೆ ಬೆಂಬಲಿಗರನ್ನು ಬಿಟ್ಟು ದಾಳಿ ಮಾಡಿದ್ದು ಸರಿಯಾ? ಇದಕ್ಕೆ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿದ್ದಾರೆ.

ಅವರು ಪರೋಕ್ಷವಾಗಿ ಡಿ ಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆಗೆ ಬೆಂಬಲ ಇದೆಯೆಂದು ಸಾಬೀತು ಪಡಿಸಿದಂತಾಗಿದೆ. ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಇರುವುದನ್ನು ತೋರಿಸಿದಂತೆ ಆಗಿದೆ ಎಂದು ಕಟೀಲ್​ ಆರೋಪಿಸಿದ್ದಾರೆ.

- Advertisement -

Related news

error: Content is protected !!