Friday, April 19, 2024
spot_imgspot_img
spot_imgspot_img

ಕಾಂಗ್ರೆಸ್​ನಲ್ಲಿ ಸದ್ಯ ಸಿದ್ದರಾಮಯ್ಯರದ್ದು ನಾಯಿಪಾಡು: ನಳಿನ್ ಕುಮಾರ್ ಕಟೀಲ್ ತಿರುಗೇಟು.

- Advertisement -G L Acharya panikkar
- Advertisement -

ಮಂಗಳೂರು(ನ.2):  ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದರೆ ಬಿಜೆಪಿ ಸೇರಿದ ಶಾಸಕರದ್ದು, ನಾಯಿಪಾಡು ಅನ್ನುವ ಸಿದ್ದರಾಮಯ್ಯ ಹೇಳಿಕೆಗೆ  ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.

ಕಾಂಗ್ರೆಸ್​ನಲ್ಲಿ ಸದ್ಯ ಸಿದ್ದರಾಮಯ್ಯನವರದ್ದು ನಾಯಿ ಪಾಡಾಗಿದೆ.ವಲಸೆ ಬಂದವರು ಎಂಬ ಕಾರಣಕ್ಕೆ ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಅವರು ದಿನನಿತ್ಯ ಪ್ರಚಾರದಲ್ಲಿ ಇರಲು, ಅಸ್ತಿತ್ವ ಉಳಿಸಿಕೊಳ್ಳಲು ಹಾಗೂ ಡಿಕೆಶಿ ಕೈ ಮೇಲಾಗುತ್ತಿದೆ ಅನ್ನುವ ಕಾರಣಕ್ಕೆ ಈ ರೀತಿ ಮಾತನಾಡುತ್ತಿದ್ದಾರೆ‌. ಒಬ್ಬ ಮಾಜಿ ‌ಮುಖ್ಯಮಂತ್ರಿ ಮತ್ತು ಅನುಭವಿ ರಾಜಕಾರಣಿ ಈ ರೀತಿ ಮಾತನಾಡೋದು ಸರಿಯಲ್ಲ ಎಂದು ನಳಿನ್ ಟೀಕಿಸಿದರು.

- Advertisement -

Related news

error: Content is protected !!