- Advertisement -
- Advertisement -
ಮಂಗಳೂರು(ನ.2): ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದರೆ ಬಿಜೆಪಿ ಸೇರಿದ ಶಾಸಕರದ್ದು, ನಾಯಿಪಾಡು ಅನ್ನುವ ಸಿದ್ದರಾಮಯ್ಯ ಹೇಳಿಕೆಗೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.
ಕಾಂಗ್ರೆಸ್ನಲ್ಲಿ ಸದ್ಯ ಸಿದ್ದರಾಮಯ್ಯನವರದ್ದು ನಾಯಿ ಪಾಡಾಗಿದೆ.ವಲಸೆ ಬಂದವರು ಎಂಬ ಕಾರಣಕ್ಕೆ ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಅವರು ದಿನನಿತ್ಯ ಪ್ರಚಾರದಲ್ಲಿ ಇರಲು, ಅಸ್ತಿತ್ವ ಉಳಿಸಿಕೊಳ್ಳಲು ಹಾಗೂ ಡಿಕೆಶಿ ಕೈ ಮೇಲಾಗುತ್ತಿದೆ ಅನ್ನುವ ಕಾರಣಕ್ಕೆ ಈ ರೀತಿ ಮಾತನಾಡುತ್ತಿದ್ದಾರೆ. ಒಬ್ಬ ಮಾಜಿ ಮುಖ್ಯಮಂತ್ರಿ ಮತ್ತು ಅನುಭವಿ ರಾಜಕಾರಣಿ ಈ ರೀತಿ ಮಾತನಾಡೋದು ಸರಿಯಲ್ಲ ಎಂದು ನಳಿನ್ ಟೀಕಿಸಿದರು.
- Advertisement -