- Advertisement -
- Advertisement -



ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವಂತ ನಿಯಮಗಳನ್ನು ಮೀರಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಇದು ಡಿಕೆ ಶಿವಕುಮಾರ್ ಅವರು ಕೇವಲ ನಾಯಕತ್ವಕ್ಕಾಗಿ ನಡೆಸುತ್ತಿರೋ ಡ್ರಾಮಾ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.
ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ನಡೆಯನ್ನು ಜನರು ಗಮನಿಸುತ್ತಿದದಾರೆ. ಚುನಾವಣೆಯ ಸಂದರ್ಭದಲ್ಲಿ ಉತ್ತರ ನೀಡುತ್ತಾರೆ. ಆದ್ರೇ ಸರ್ಕಾರ ರಾಜ್ಯ ಸರ್ಕಾರ ಮೇಕೆದಾಟು ಯೋಜನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.


ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಜನರ ಬಗ್ಗೆ ಕಾಳಜಿಯೇ ಇಲ್ಲ. ಐದು ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. ಆಗ ಈ ಯೋಜನೆ ಬಗ್ಗೆ ಡಿಪಿಆರ್ ರಚಿಸದೇ, ಯಾಕ್ ಸುಮ್ಮನಿದ್ರಿ.? ಈ ಬಗ್ಗೆ ರಾಜ್ಯದ ಜನತೆಗೆ ಡಿಕೆ ಶಿವಕುಮಾರ್ ಉತ್ತರಿಸಬೇಕು ಎಂದು ಕಿಡಿಕಾರಿದರು.


- Advertisement -








