- Advertisement -
- Advertisement -
ಮಂಗಳೂರಿನಲ್ಲಿ ಖಾಸಗಿ ಬಸ್ ಕಂಡಕ್ಟರ್ ಓರ್ವ ಫುಟ್ ಬೋರ್ಡ್ ನಲ್ಲಿ ನಿಂತುಕೊಂಡಿದ್ದು, ತಿರುವಿನಲ್ಲಿ ಬಸ್ ನಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ನಂತೂರಿನಲ್ಲಿ ನಡೆದಿದ್ದು ಹಾಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರು ಹೊಸ ಆದೇಶ ಹೊರಡಿಸಿದ್ದಾರೆ. ಇನ್ನು ಮುಂದೆ ಎಲ್ಲಾ ಬಸ್ ಗಳಿಗೆ ಡೋರ್ ಕಡ್ಡಾಯವಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
ಕಂಡಕ್ಟರ್ ಬಿದ್ದು ಮೃತಪಟ್ಟ ಹಿನ್ನೆಲೆಯಲ್ಲಿ ಕಮಿಷನರ್ ಈ ಆದೇಶ ಹೊರಡಿಸಿದ್ದಾರೆ. ಹಾಗೆನೇ ಕಂಡಕ್ಟರ್ ಸೇರಿ ಯಾರೂ ಕೂಡಾ ಫುಟ್ ಬೋರ್ಡ್ ನಲ್ಲಿ ನಿಲ್ಲುವಂತಿಲ್ಲ, ಸಮಯ ಫಾಲೋ ಮಾಡಬಾರದು, ಸೇಫ್ಟಿ ಮುಖ್ಯ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.
- Advertisement -