ವಿಟ್ಲ: ನಾಟೆಕಲ್ಲು ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಸ್ .ಡಿ.ಎಂ.ಸಿ ಅಧ್ಯಕ್ಷ ಗಣಪತಿ ಭಟ್ ಧ್ವಜಾರೋಹಣ ನೆರವೇರಿಸಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದಿ|ಅಚ್ಯುತ ನಾಯಕ್ ಈ ಶಾಲೆಯ ಸ್ಥಾಪನೆಗೆ ಕಾರಣಕರ್ತರಾದವರು ಇಂತಹ ಸಮಾಜಮುಖಿ ವ್ಯಕ್ತಿಯನ್ನು ಕಳೆದುಕೊಂಡದ್ದು, ಶಾಲೆಗೆ ಮಾತ್ರವಲ್ಲದೆ ಊರಿಗೆ ತುಂಬಲಾರದ ನಷ್ಟವೆಂದು ಹೇಳಿದರು.
ಗ್ರಾಮ ಪಂಚಾಯತ್ ಪೂರ್ವ ಅಧ್ಯಕ್ಷ ಹರಿಶ್ಚಂದ್ರ ನಾಯಕ್ ಮತ್ತು ಜಯಪ್ರಕಾಶ್ ನಾಯಕ್ ನುಡಿನಮನ ಸಲ್ಲಿಸಿ ಮಾತನಾಡಿದರು.
ಈ ಹಿಂದೆ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯೋಪಾಧ್ಯಾಯ ನಾರಾಯಣ ಪೂಜಾರಿ ಎಸ್.ಕೆ ಮತ್ತು ಪುಷ್ಪಾವತಿ ಇವರನ್ನು ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವ ಈ ಕಾಲಘಟ್ಟದಲ್ಲಿ ಪೋಷಕರ ಆಶಯದಂತೆ ಅವರು ಬಯಸುವ ರೀತಿಯಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸಿಕೊಂಡು ಶಿಕ್ಷಣವನ್ನು ನೀಡುವ ವ್ಯವಸ್ಥೆಯಾಬೇಕೆಂದು ಸನ್ಮಾನಿತ ನಿವೃತ್ತ ಶಿಕ್ಷಕ ನಾರಾಯಣ ಪೂಜಾರಿ ಹೇಳಿದರು.
ಸ್ವಾತಂತ್ರ್ಯ ದಿನಾಚರಣೆ ಬಗ್ಗೆ ಪುಷ್ಪಾವತಿ ಟೀಚರ್ ಮಾತನಾಡಿದರು. ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ನಡೆದವು. ಎಸ್.ಡಿ.ಎಂ.ಸಿ ಅಧ್ಯಕ್ಷೆ ರೇಷ್ಮಾ ಬಾಯಾರು ,ಇಸ್ಮಾಯಿಲ್ ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯತೀಶ ಹಡೀಲು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಶ್ರೀಪತಿ ನಾಯಕ್ ಸ್ವಾಗತಿ, ಪ್ರತೀಮಾ ವಂದಿಸಿ, ರೇಣುಕಾ ನಿರ್ವಹಿಸಿದರು.