Saturday, June 28, 2025
spot_imgspot_img
spot_imgspot_img

ಸೇನೆ ಹಾಗೂ ಆಡಳಿತ ವ್ಯವಸ್ಥೆಗೆ ಸಹಕರಿಸುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಪತ್ರಿಕಾ ಪ್ರಕಟಣೆಯಲ್ಲಿ ಮನವಿ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘವು ಪತ್ರಿಕಾ ಪ್ರಕಟಣೆಯ ಮೂಲಕ ‘ಆಪರೇಷನ್ ಸಿಂಧೂರ್’ಗೆ ಅಭಿನಂದಿಸಿ ಸೇನೆ ಹಾಗೂ ಆಡಳಿತ ವ್ಯವಸ್ಥೆಗೆ ಸಹಕರಿಸುವಂತೆ ಮನವಿ ಮಾಡಿದೆ.

ಪಹಲ್ಲಾಮ್‌ನಲ್ಲಿ ನಿರಾಯುಧ ಪ್ರವಾಸಿಗರ ಮೇಲೆ ನಡೆದ ಹೇಡಿತನದ ದಾಳಿಯ ನಂತರ ಪಾಕ್ ಪ್ರಾಯೋಜಿತ ಭಯೋತ್ಪಾದಕರು ಮತ್ತು ಅವರ ಬೆಂಬಲಿತ ಸಂರಚನಾ ವ್ಯವಸ್ಥೆಯ ನಾಶಕ್ಕಾಗಿ ತೆಗೆದುಕೊಂಡ “ಆಪರೇಷನ್ ಸಿಂಧೂರ್'” ಎಂಬ ನಿರ್ಣಾಯಕ ಕ್ರಮಕ್ಕಾಗಿ ಕೇಂದ್ರ ಸರ್ಕಾರದ ನಾಯಕತ್ವ ಮತ್ತು ನಮ್ಮ ಸಶಸ್ತ್ರ ಪಡೆಗಳನ್ನು ನಾವು ಅಭಿನಂದಿಸುತ್ತೇವೆ. ಹಿಂದೂ ಪ್ರವಾಸಿಗರ ಕ್ರೂರ ಹತ್ಯಾಕಾಂಡದಲ್ಲಿ ನೊಂದ ಕುಟುಂಬಗಳಿಗೆ ಮತ್ತು ಇಡೀ ದೇಶಕ್ಕೆ ನ್ಯಾಯ ಒದಗಿಸುವ ಈ ಕ್ರಮವು ಇಡೀ ದೇಶದ ಸ್ವಾಭಿಮಾನ ಮತ್ತು ಆತ್ಮಬಲವನ್ನು ಹೆಚ್ಚಿಸಿದೆ.ಪಾಕಿಸ್ತಾನದಲ್ಲಿ ಭಯೋತ್ಪಾದಕರು, ಅವರ ಮೂಲಸೌಕರ್ಯ ಮತ್ತು ಬೆಂಬಲ ವ್ಯವಸ್ಥೆಗಳ ವಿರುದ್ಧ ತೆಗೆದುಕೊಳ್ಳುತ್ತಿರುವ ಮಿಲಿಟರಿ ಕ್ರಮವು ದೇಶದ ಭದ್ರತೆಗೆ ಅಗತ್ಯ ಮತ್ತು ಅನಿವಾರ್ಯ ಎಂದು ನಾವು ಸಂಪೂರ್ಣವಾಗಿ ಒಪ್ಪುತ್ತೇವೆ. ರಾಷ್ಟ್ರೀಯ ಬಿಕ್ಕಟ್ಟಿನ ಈ ಸಮಯದಲ್ಲಿ, ಇಡೀ ದೇಶವು ಸರ್ಕಾರ ಮತ್ತು ಸಶಸ್ತ್ರ ಪಡೆಗಳೊಂದಿಗೆ ತನು ಮನ ಧನಸಹಿತವಾಗಿ ನಿಂತಿದೆ.ಭಾರತದ ಗಡಿಯಲ್ಲಿರುವ ಧಾರ್ಮಿಕ ಸ್ಥಳಗಳು ಮತ್ತು ನಾಗರಿಕ ವಸತಿ ಪ್ರದೇಶಗಳ ಮೇಲೆ ಪಾಕಿಸ್ತಾನಿ ಸೇನೆ ನಡೆಸುತ್ತಿರುವ ದಾಳಿಗಳನ್ನು ನಾವು ಖಂಡಿಸುತ್ತೇವೆ ಮತ್ತು ಈ ಘೋರ, ಅಮಾನವೀಯ ದಾಳಿಯಲ್ಲಿ ಬಲಿಯಾದವರ ಕುಟುಂಬಗಳಿಗೆ ಹೃತ್ತೂರ್ವಕ ಸಂತಾಪ ಸೂಚಿಸುತ್ತೇವೆ.ಈ ಸವಾಲಿನ ಸಮಯದಲ್ಲಿ, ಸರ್ಕಾರ ಮತ್ತು ಆಡಳಿತವು ನೀಡುತ್ತಿರುವ ಸೂಚನೆಗಳನ್ನು ಸಂಪೂರ್ಣವಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ರಾಷ್ಟ್ರೀಯ ಸ್ವಯಂಸೇವಕ ಸಂಘವು ಎಲ್ಲಾ ನಾಗರಿಕರಿಗೆ ಮನವಿ ಮಾಡುತ್ತದೆ. ಇದರೊಂದಿಗೆ, ನಮ್ಮ ಪವಿತ್ರ ನಾಗರಿಕ ಕರ್ತವ್ಯವನ್ನು ನಿರ್ವಹಿಸುವಾಗ, ಸಾಮಾಜಿಕ ಏಕತೆ ಮತ್ತು ಸಾಮರಸ್ಯವನ್ನು ಭಂಗಗೊಳಿಸುವಂಥ ರಾಷ್ಟ್ರವಿರೋಧಿ ಶಕ್ತಿಗಳ ಯಾವುದೇ ಪಿತೂರಿಯನ್ನು ಯಶಸ್ವಿಯಾಗಲು ಬಿಡದಂತೆ ನಾವೆಲ್ಲರೂ ಜಾಗರೂಕರಾಗಿರಬೇಕು.ಎಲ್ಲಾ ನಾಗರಿಕರು ತಮ್ಮ ದೇಶಭಕ್ತಿಯನ್ನು ಪ್ರದರ್ಶಿಸಲು ಮತ್ತು ಅಗತ್ಯವಿರುವಲ್ಲೆಲ್ಲಾ ಮತ್ತು ಅಗತ್ಯವಿರುವ ವಿಧದಲ್ಲಿ ಸೇನೆ ಮತ್ತು ನಾಗರಿಕ ಆಡಳಿತದೊಂದಿಗೆ ಸಹಕರಿಸಲು ಸಿದ್ಧರಾಗಿರಬೇಕು ಮತ್ತು ರಾಷ್ಟ್ರೀಯ ಏಕತೆ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳುವ ಎಲ್ಲಾ ಪ್ರಯತ್ನಗಳನ್ನು ಬಲಪಡಿಸಬೇಕು ಎಂದು ವಿನಂತಿಸುತ್ತೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!